ಹೊಸದಿಗಂತ ಬೆಳಗಾವಿ:
ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮಧ್ಯಾಹ್ನ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರುಶನ ಪಡೆದು ಪೂಜೆ ಸಲ್ಲಿಸಿದರು.
ಬಳಿಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯ ನಡೆಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.