ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಶೀಘ್ರ ಚೇತರಿಸಿ ಕರ್ತವ್ಯಕ್ಕೆ ಮರಳುವಂತೆ ಆಗಲಿ ಎಂದ ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರ ತಿಳಿದು , ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಶೀಘ್ರವೇ ಅವರು ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳುವಂತೆ ಆಗಲಿ ಅಂತ ಆಶಿಸಿದ್ದಾರೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ.ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!