ಪೆನ್‌ಡ್ರೈವ್‌ ಕೇಸ್‌: ಯಾರೂ ಏನೂ ಹೇಳಿಕೆ ಕೊಡ್ಬೇಡ್ರಪ್ಪ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್‌ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಚಿವರುಗಳು ಕೂಡ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೆನ್​ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!