ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದಾಖಲೆಯೊಂದನ್ನು ಬರೆಯಲಿದ್ದಾರೆ.
ಹೌದು, 2026-27ನೇ ಸಾಲಿನ ಬಜೆಟ್ ನಾಳೆ ಮಂಡನೆಯಾಗಲಿದೆ. ಇದು ಸಿಎಂ ಸಿದ್ದರಾಮಯ್ಯರ 17ನೇ ಬಜೆಟ್ ಆಗಿರಲಿದೆ. ಈವರೆಗೂ ಯಾವ ಮುಖ್ಯಮಂತ್ರಿಯೂ 17 ಬಾರಿ ಬಜೆಟ್ ಮಂಡನೆ ಮಾಡಿಲ್ಲ.
ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಜನಸಾಮಾನ್ಯರು ಈ ಬಾರಿಯ ಬಜೆಟ್ನಿಂದ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿಎಂ ಎಲ್ಲ ಇಲಾಖೆಗಳ ಜತೆ ಚರ್ಚೆ ನಡೆಸಿ ಬಜೆಟ್ ಅಂತಿಮಗೊಳಿಸಲಾಗಿದೆ.
ಈ ಬಾರಿಯ ಬಜೆಟ್ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆಯನ್ನು ತಗ್ಗಿಸಲು ಯೋಜನೆಗಳಲ್ಲಿ ಬದಲಾವಣೆಗಳನ್ನು ತರಲಾಗುತ್ತದೆಯೇ ಎಂಬ ಕುತೂಹಲವಿದೆ. ಮೂಲಸೌಕರ್ಯ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.



