ಆಡಿಯೋ ವೈರಲ್ ಬೆನ್ನಲ್ಲೇ ಶಾಸಕ ಬಿಆರ್‌ ಪಾಟೀಲ್‌ಗೆ ಸಿಎಂ ಸಿದ್ದರಾಮಯ್ಯ ಬುಲಾವ್‌

ಹೊಸದಿಗಂತ ಕಲಬುರಗಿ:

ರಾಜೀವ್ ಗಾಂಧಿ ವಸತಿ ನಿಗಮದಲ್ಲಿನ ಭ್ರಷ್ಟಾಚಾರದ ಕುರಿತು ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬುಲಾವ್ ಬಂದಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಆಪ್ತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರಿಗೆ ಜೂನ್ ೨೫ಕ್ಕೆ ಬೆಂಗಳೂರಿಗೆ ಆಗಮಿಸಿ, ಭೇಟಿಯಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಇಲ್ಲವಾದರೇ ಇಂದು ರಾಯಚೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ ವೇಳೆ ಭೇಟಿಯಾಗಿ ಮಾತುಕತೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು,ಇಲ್ಲ ನನಗೆ ರಾಯಚೂರು ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ,ನಾನು ಬರುವುದಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್ ತಿಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ನಿಮ್ಮ ಕ್ಷೇತ್ರಕ್ಕೆ ಆಗಿರುವ ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರು ದೂರವಾಣಿಯಲ್ಲಿ ಹೇಳಿದ್ದು, ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯಿಂದ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಭಾರಿ ಡ್ಯಾಮೇಜ್ ಆಗಿದ್ದು,ಇದೀಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!