ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಯೋಜಿತ ‘ಆತ್ಮಹತ್ಯಾಭಾಗ್ಯ’ ಜಾರಿಯಲ್ಲಿದೆ: ಯತ್ನಾಳ್ ಕಿಡಿ

ಹೊಸ ದಿಗಂತ ವರದಿ, ವಿಜಯಪುರ:

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಾಯೋಜಿತ ‘ಆತ್ಮಹತ್ಯಾಭಾಗ್ಯ’ ಜಾರಿಯಲ್ಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಹಿಂದೆ ಅಧಿಕಾರಿಗಳಿಗೆ ಈ ಭಾಗ್ಯ ಒದಗಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಇದೆ. ಸದ್ಯ ಗುತ್ತಿಗೆದಾರರ ಪ್ರಾಣ ತೆಗೆಯುವ ಹಾಗೂ ಅವರಿಗೆ ಆತ್ಮಹತ್ಯಾ ಭಾಗ್ಯ ನೀಡುವ ಕೆಲಸಕ್ಕೆ ಸಿದ್ದರಾಮಯ್ಯನವರು ಸಿದ್ಧವಾಗಿದ್ದಾರೆ ಎಂದು ದೂರಿದರು.

ಗುತ್ತಿಗೆದಾರ ಗೌತಮ್ ಸಾವಿಗೆ ನ್ಯಾಯ ಕೊಡಿಸುವವರು ಯಾರು ? ಕೆಂಪಯ್ಯ ? ಸಿದ್ದರಾಮಯ್ಯ? ಬ್ರದರ್ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಬ್ಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ. ಈಗಲಾದರೂ ಕೆಂಪಯ್ಯನವರು ಗುತ್ತಿಗೆದಾರರ ಪರ ಮಾತನಾಡುತ್ತಾರಾ ? ಎಂದು ಪ್ರಶ್ನಿಸಿದ್ದಾರೆ.

ಗುತ್ತಿಗೆದಾರರ ಕ್ಷೇಮದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯನವರು ಈಗ ಮೌನ ವಹಿಸಿರುವ ಕಾರಣವೇನು ?, ‘ಬ್ರದರ್’ ಇವರ ಮಾತು ಕೇಳುತ್ತಿಲ್ಲವಾ ? ಎಂದು ಕುಟಿಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!