ಹೊಸದಿಗಂತ ವರದಿ ಹಾವೇರಿ:
ಕನಕದಾಸರ 536ನೇ ಜಯಂತ್ಸೋತ್ಸವ ಹಾಗೂ ಭಾವೈಕ್ಯ ಸಮಾರಂಭ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಜರುಗಲಿದೆ. ಅದರ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನ.29 ರಂದು ನೆರವೇರಿಸುವರು ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ದ ಸಾನಿಧ್ಯವನ್ನು ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಹಿಸುವರು.
ಭಾವೈಕ್ಯ ಸಮಾರಂಭದ ಸಾನಿಧ್ಯವನ್ನು ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಜಿ, ಜಮಾತೆ ಅಹಲೆ ಸುನ್ನತ್ ರಾಜ್ಯ ಘಟಕದ ಅಧ್ಯಕ್ಷ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಕ್ಯಾಥೋಲಿಕ್ ಧರ್ಮಗುರು ಡಾ. ಫಾ. ಅಲ್ಫೋನ್ಸ್ ಫರ್ನಾಂಡಿಸ್ ಯೇಸ ಇವರು ದಿವ್ಯ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ. ಕನಕ ಗುರುಪೀಠದ ಸಂಸ್ಥಾಪಕ ಅಧ್ಯಕ್ಷ ಹೆಚ್.ವಿಶ್ವನಾಥ್ ಭಾವೈಕ್ಯ ನುಡಿಗಳನ್ನ ಆಡಳಲಿದ್ದಾರೆ. ಅಧ್ಯಕ್ಷತೆಯನ್ನು ಬ್ಯಾ ಡಗಿ ಶಾಸಕರಾದ ಬಸವರಾಜ ಶಿವಣ್ಣನವರ ವಹಿಸುವುದಾಗಿ ತಿಳಿಸಿದರು.