ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಯಾವಾಗಲೂ ಜಲಾಶಯ ಭರ್ತಿಯಾದ ಅಥವಾ ಭರ್ತಿಯಾಗಿ 3ನೇ ದಿನ ಬಾಗಿನ ಸಲ್ಲಿಸುವುದು ವಾಡಿಕೆ. ಈ ಬಾರಿ ಜಲಾಶಯ ತುಂಬಿದ ಐದಾರು ದಿನಗಳ ಬಳಿಕ ಬಾಗಿನ ಸಲ್ಲಿಸಲಾಗುತ್ತಿದೆ.
ಇಂದು ನಡೆಯುವ ಬಾಗಿನ ಸಮಾರಂಭಕ್ಕೆ ಜಿಲ್ಲಾಡಳಿತ, ಕಾವೇರಿ ನೀರಾವರಿ ನಿಗಮ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಾಡಿಕೆಯಂತೆ ಡಿಸಿಎಂ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.