ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಇಂದು ಸಿಎಂ ಸಿದ್ದರಾಮಯ್ಯ ಶಿಫ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಇಂದು ಸಿಎಂ ಸಿದ್ದರಾಮಯ್ಯ ಶಿಫ್ಟ್ ಆಗಲಿದ್ದಾರೆ.

ಶಿವಾನಂದ ಸರ್ಕಲ್ ಬಳಿ ಇರೋ ಗಾಂಧಿ ಭವನ ರಸ್ತೆಯಲ್ಲಿರುವ ಕುಮಾರಕೃಪಾ ಪೂರ್ವ ನಂ.1 ನಿವಾಸದಲ್ಲಿ ಈವರೆಗೂ ಸಿಎಂ ಸಿದ್ದರಾಮಯ್ಯ ವಾಸವಾಗಿದ್ದರು. ಆದರೆ ಇದೀಗ ನೂತನವಾಗಿ ನವೀಕರಣಗೊಂಡಿರುವ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ ಆಗುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಬೆಳಗ್ಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಪೂಜೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದರು.

ಮಾಜಿ ಸಿಎಂ ಯಡಿಯೂರಪ್ಪ ಕಾವೇರಿ ನಿವಾಸದಿಂದ ಹೊರ ಬಂದ ನಂತರ ಸಣ್ಣ-ಪುಟ್ಟ ರಿಪೇರಿ ಕೆಲಸಗಳು ನಡೆದಿದ್ದವು. ಇದೀಗ ಕಾವೇರಿ ನಿವಾಸ ನವೀಕರಣಗೊಂಡಿದ್ದು, ಇನ್ಮುಂದೆ ಸಿಎಂ ಸಿದ್ದರಾಮಯ್ಯ ವಾಸವಿರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!