ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ: ಯಾವ ವಿಚಾರದ ಕುರಿತು ಮಾತನಾಡ್ತಾರೆ ಸಿಎಂ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಬಿಗ್ ಫೈಟ್‌ಗೆ ಸಜ್ಜಾಗಿದೆ.

ಇದುವರೆಗೆ 24 ಲೋಕಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಿದ್ದು, ಇನ್ನೆರಡು ಕ್ಷೇತ್ರಗಳ ಘೋಷಣೆಯಾಗಬೇಕಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುರ್ತು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯನವರ ಈ ಪತ್ರಿಕಾಗೋಷ್ಠಿ ಹಲವು ಪ್ರಶ್ನೆಗಳನ್ನು ಎತ್ತಿದೆ. ಉಳಿದ ನಾಲ್ಕು ಅಭ್ಯರ್ಥಿಗಳ ಹೆಸರನ್ನು ತಿಳಿಸುತ್ತಾರಾ? ಅಥವಾ ಬರ ಪರಿಹಾರ ಘೋಷಣೆ ಮಾಡದ ಕೇಂದ್ರ ಸರ್ಕಾರದ ಜೊತೆ ಕಾನೂನು ಕ್ರಮದ ಬಗ್ಗೆ ಮಾತನಾಡುತ್ತಾರಾ? ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!