ನೇಹಾ ಹಿರೇಮಠ ತಂದೆ ನಿರಂಜನ್‌ ಬಳಿ ಕ್ಷಮೆಯಾಚಿಸಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಹಾ ತಂದೆ‌ ನಿರಂಜನ ಜೊತೆಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೋನ್‌ ನಲ್ಲಿ ನಿರಂಜನ್ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ  ನಾವು ನಿಮ್ಮ ಜೊತೆ ಇದ್ದೇವೆ, ವೆರಿ ಸಾರಿ ಎಂದು ಕ್ಷಮೆ ಕೇಳಿದ್ದಾರೆ.

ನನ್ನ ಕುಟುಂಬ ಹಾಗೂ ಎಲ್ಲಾ ಮಠಾಧೀಶರುಗಳ ಪರವಾಗಿ ನಾನು ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಕೈಗೊಂಡ ನಿರ್ಧಾರಕ್ಕೆ ಕಾನೂ ಸಚಿವರು, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಪ್ರಕಣದ ಸಂಪೂರ್ಣ ತನಿಖೆ ಮಾಡಿ ನಮಗೆ ಬೇಗನೆ ನ್ಯಾಯ ಕೊಡಿಸಿ ಎಂದು ಇದೇ ವೇಳೆ ನಿರಂಜನ್‌ ಅವರು ಸಿಎಂ ಅವರನ್ನು ಕೇಳಿಕೊಂಡರು. ಈ ವೇಳೆ ಸಿಎಂ, ಆದಷ್ಟು ಬೇಗನೇ ನಿಮಗೆ ನ್ಯಾಯ ಕೊಡ್ತೀನಿ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!