ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸಂತಾಪ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ನಟ, ನಿರ್ದೇಶಕ, ನಿರ್ಮಾಪಕರಾಗಿ ಹಲವು ವರ್ಷಗಳ ಕಾಲ ಕೊಡುಗೆ ನೀಡಿದ ಕನ್ನಡದ ಪ್ರೀತಿಯ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ.

ದ್ವಾರಕೀಶ್ ಅವರ ಸಾವು ಕನ್ನಡ ಚಿತ್ರರಂಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಡಿಕೆಶಿ ಸಂತಾಪ

ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ದ್ವಾರಕೀಶ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ಆಘಾತವಾಯಿತು. ಅವರು 1964 ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಮತ್ತು ಹಾಸ್ಯನಟ, ನಾಯಕ ಮತ್ತು ಪೋಷಕ ನಟರಾಗಿ ಕೆಲಸ ಮಾಡಿದರು.

ಕನ್ನಡ ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿರುವ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಓಂ ಶಾಂತಿ ಎಂದು ಡಿಸಿಎಂ ಡಿಕೆಶಿ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!