ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಿ ಕೇಂದ್ರದಿಂದ ನೆರವಿಗೆ ಸಿಎಂ ಮನವಿ ಮಾಡಲಿದ್ದಾರೆ.
ದೆಹಲಿಯಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯನ್ನು ಸಿಎಂ ಭೇಟಿ ಮಾಡಲಿದ್ದಾರೆ. ರಾಜ್ಯವು ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರಕ್ಕೆ 18,171,44 ಕೋಟಿ ರೂಪಾಯಿ ಕೋರಿದೆ. ಈ ಬಗ್ಗೆ ಮಾತುಕತೆ ನಡೆಯಲಿದೆ.
ಕೃಷ್ಣಭೈರೇಗೌಡ ಅವರ ಜೊತೆಗೆ ಸಿಎಂ ಪ್ರಧಾನಿ ಭೇಟಿ ಮಾಡಿ ರಾಜ್ಯದ ಬಗ್ಗೆ ಮಾತನಾಡಲಿದ್ದಾರೆ. ಈ ಹಿಂದೆ ಸಿಎಂ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ರೂಪಾಯಿಯೂ ಬಂದಿಲ್ಲ ಎಂದು ಹೇಳಿದ್ದರು. ರಾಜ್ಯದ ಸಚಿವರು ಎಷ್ಟು ಬಾರಿ ಪ್ರಧಾನಿ ಭೇಟಿಗೆ ಅವಕಾಶ ಕೋರಿದರೂ ಅದನ್ನು ನಿರ್ಲಕ್ಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದರು.