ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ರಾಜ್ಯಪಾಲ ಆರ್ಎನ್ ರವಿ ಅವರು ಸೋಮವಾರ ವಿಧಾನಸಭಾ ಅಧಿವೇಶನದಿಂದ ಹೊರನಡೆದ ಪ್ರಸಂಗ ನಡೆದಿದೆ.
ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ಕಡತಕ್ಕೆ ತೆಗೆದುಕೊಳ್ಳಬೇಕು, ರಾಜ್ಯಪಾಲರು ಸೇರಿಸಿರುವ ಉಳಿದ ಭಾಷಣವನ್ನು ತೆಗೆದುಹಾಕಬೇಕು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸ್ಪೀಕರ್ಗೆ ಹೇಳಿದ್ದು, ಈ ಬಳಿಕ ಗವರ್ನರ್ ಆರ್ಎನ್ ರವಿ ಸದನದಿಂದ ಹೊರ ನಡೆದರು.
ಜಾತ್ಯತೀತತೆ ಸೇರಿದಂತೆ ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖವನ್ನು ರಾಜ್ಯ ಸರ್ಕಾರ ಭಾಷಣದಲ್ಲಿ ಸಿದ್ಧಪಡಿಸಿತ್ತು. ಆದರೆ ಭಾಷಣದ ಆ ಭಾಗಗಳನ್ನು ಅವರು ಬಿಟ್ಟುಬಿಟ್ಟಿದ್ದಾರೆ.
ಆಡಳಿತಾರೂಢ ಡಿಎಂಕೆ ಪ್ರಚಾರ ಮಾಡುವ ದ್ರಾವಿಡ ಮಾದರಿಯ ಉಲ್ಲೇಖವನ್ನೂ ಅವರು ಓದಾದ ಹಿನ್ನೆಲೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಎಂಕೆ ಸ್ಟಾಲಿನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.