ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವಿಚ್ಛೇದನ ಅರ್ಜಿಯ ವಿಚಾರಣೆಯನ್ನು ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಆಗಸ್ಟ್ 7 ಕ್ಕೆ ಮುಂದೂಡಿದೆ. ಜೂನ್ 15 ರಂದು ನಿಗದಿಯಾಗಿದ್ದ ಮಹತ್ವದ ವಿಚಾರಣೆಗೆ ಸಿಎಂ ವಿಜಯ್ ಮತ್ತು ಸಂಗೀತಾ ಇಬ್ಬರೂ ಖುದ್ದಾಗಿ ಹಾಜರಾಗಿರಲಿಲ್ಲ.
ದಂಪತಿ ರಾಜಿ ಮಾಡಿಕೊಳ್ಳುವ ಸಾಧ್ಯತೆ?
ಕಳೆದ ಫೆಬ್ರವರಿಯಲ್ಲಿ ಸಂಗೀತಾ ಅವರು ವಿಚ್ಛೇದನ ಕೋరి ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ರಾಜಿ ಸಂಧಾನ ನಡೆಯುತ್ತಿದ್ದು, ದಂಪತಿ ಮತ್ತೆ ಒಂದಾಗಲಿದ್ದಾರೆ ಎಂಬ ಊಹಾಪೋಹಗಳು ತಮಿಳುನಾಡು ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಮನವಿ
ಖ್ಯಾತ ಸಾರ್ವಜನಿಕ ವ್ಯಕ್ತಿಗಳಾಗಿರುವುದರಿಂದ ಭದ್ರತೆ ಮತ್ತು ಇತರ ಕಾರಣಗಳಿಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಇಬ್ಬರ ಪರ ವಕೀಲರು ಕೋರ್ಟ್ಗೆ ಅನುಮತಿ ಕೋರಿದ್ದರು. ನ್ಯಾಯಾಲಯವು ಇದಕ್ಕೆ ಸಮ್ಮತಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ಗೆ ನಿಗದಿಪಡಿಸಿದೆ. ವಿಜಯ್ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆಯುತ್ತಿರುವುದರಿಂದ ಎಲ್ಲರ ಕಣ್ಣು ಈ ಪ್ರಕರಣದ ಮೇಲಿದೆ.



