ಸಿಎಂ ಭರವಸೆ: ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಮುಷ್ಕರ ವಾಪಾಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಕಳೆದ ಐದು ದಿನಗಳಿಂದ ಒತ್ತಾಯಿಸಿ ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದು, ಇಂದು ಐದನೇ ದಿನಕ್ಕೆ ಕಾಲಿಟ್ಟಿದ್ದ ಮುಷ್ಕರವು ವೇತನ ಹೆಚ್ಚಳಕ್ಕೆ ಹಾಗೂ 60 ವರ್ಷದವರೆಗೂ ಸೇವಾ ಭದ್ರತೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ವಾಪಸ್ ಪಡೆಯಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಹೆಚ್. ಯಮೋಜಿ, ಭಾರತೀಯ ಮಜ್ದೂರ್ ಸಂಘ ಹಾಗೂ KSHCOEA ರಾಜ್ಯ ಸಮಿತಿಯು ನಿಯೋಗವು ದಿನಾಂಕ 09.02.2023 ರಾತ್ರಿ 8.30ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಸಭೆ ಮಾಡಲಾಯಿತು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!