ಗುಡುಗಿದ ಜಡಿಮಳೆಗೆ ಬೆಚ್ಚಿಬಿದ್ದ ಕರಾವಳಿ, ಮಲೆನಾಡು: ಆತಂತ್ರ ಸ್ಥಿತಿಯಲ್ಲಿ ತಗ್ಗು ಪ್ರದೇಶದ ಜನತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಮಲೆನಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ತಗ್ಗು ಪ್ರದೇಶದ ಜನತೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ರಾತ್ರಿಯಿಡೀ ಗುಡುಗು ಸಹಿತ ಮಳೆ ಸುರಿದಿದ್ದು, ಜನರ ಹೊರಬರಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗ್ತಿರೋ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ 2 ದಿನಗಳ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಇಂದು ಉಡುಪಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ ಜೋರಾಗಿದ್ದು 4 ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. 2 ದಿನ ಜಿಲ್ಲೆಯಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತ ಕ್ರಮವಾಗಿ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ‌-ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!