ಸಿಲಿಕಾನ್ ಸಿಟಿಗೆ ತಂಪೆರೆದ ವರುಣ: ಎಲ್ಲೆಡೆ ಟ್ರಾಫಿಕ್ ಜಾಮ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇದೀಗ ಪ್ರತಿನಿತ್ಯ ಬೆಂಗಳೂರಿನಲ್ಲಿ ಮಳೆ ಬರುತ್ತಿದ್ದು, ಸತತ ನಾಲ್ಕು ದಿನದಿಂದ ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆ ಹಿನ್ನಲೆ ದ್ವಿಚಕ್ರ ವಾಹನ ಸವಾರರು ಪರದಾಡುತ್ತಿದ್ದು, ಬಸ್ ನಿಲ್ದಾಣಗಳಲ್ಲಿ ಬೈಕ್​ಗಳನ್ನು ಪಾರ್ಕ್ ಮಾಡಿ ಮಳೆ ಬೀಳದ ಕಡೆ ನಿಂತ್ತಿದ್ದಾರೆ. ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಗ್ಗು ಪ್ರದೇಶದ ಬಹುತೇಕ ರಸ್ತೆಗಳು ಮಳೆ‌ ನೀರಿನಿಂದ ಆವೃತಗೊಂಡಿವೆ.
ಚಾಲುಕ್ಯ ಸರ್ಕಲ್, ಶಿವಾನಂದ ವೃತ್ತ, ಓಕಳಿಪುರಂ, ಹಡ್ಸನ್ ಸರ್ಕಲ್, ಬ್ರಿಗೇಡ್ ರೋಡ್ ಜಂಕ್ಷನ್, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ ಬಳಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಪರದಾಡುವಂತ್ತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!