ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನಲ್ಲಿ ಬಿಪರ್ಜಾಯ್ ಚಂಡಮಾರುತ ಅಪ್ಪಳಿಸಿದ ನಂತರ ರಾಜ್ಯದ ಅನೇಕ ಕಡೆ ಜೂ. 24 ರಂದು ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದೆ. ಜೊತೆಗೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಖೇಡಾ ಜಿಲ್ಲೆಯ ನಾಡಿಯಾಡ್ ಪ್ರದೇಶದ ಬೈಪಾಸ್
ಮಳೆ ನೀರಿನಿಂದ ತುಂಬಿಕೊಂಡಿದ್ದು, ಈ ಬೈಪಾಸ್ನಲ್ಲಿ ಮಕ್ಕಳಿದ್ದ ಕಾಲೇಜು ಬಸ್ ಸಿಲುಕಿಕೊಂಡಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು ಬಸ್ಸಿನಲ್ಲಿದ್ದ ಎಲ್ಲ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.
ವಿದ್ಯಾರ್ಥಿಗಳನ್ನು ಬಸ್ಸಿನ ಕಿಟಕಿಯ ಮೂಲಕ ಹೊರಗೆ ತರಲಾಗಿದೆ. ಈ ಕಾರ್ಯಚರಣೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ , ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಒಂದು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.