ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಅಪಘಾತ ಸಂಭವಿಸಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಕಾಶಿಪುರದ ಗೌತಮ್ (21) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಶರಾವತಿ ನಗರದಲ್ಲಿ ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದೆ. ಎನ್ಇಎಸ್ ಕಾಲೇಜು ವಿದ್ಯಾರ್ಥಿಯಾಗಿದ್ದ ಗೌತಮ್, ಎನ್ಇಎಸ್ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಯಲ್ಲಿ ಭಾಗಿಯಾಗಿದ್ದ. ರಾತ್ರಿಯಿಡೀ ಕಾಲೇಜಿನಲ್ಲಿದ್ದು ನಸುಕಿನ ಜಾವ ಬೈಕಿನಲ್ಲಿ ತೆರಳುವಾಗ ರಸ್ತೆಯ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿದೆ. ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.