ಬನ್ನೇರುಘಟ್ಟ ತಟ್ಟೆಕೆರೆ ವ್ಯಾಪ್ತಿಯಲ್ಲಿ ಕಾಡಾನೆಗೆ ಡಿಕ್ಕಿ: ಒದ್ದಾಡಿ ರಸ್ತೆಯಲ್ಲೇ ಪ್ರಾಣಬಿಟ್ಟ ಗಜರಾಜ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ.

ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಕಾಡಾನೆ ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲೇ ನರಳಾಡಿದೆ.

ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೊನೆಗೆ ರಸ್ತೆಯಲ್ಲೇ ಸಾವನ್ನಪ್ಪಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!