ಹಾಸ್ಯನಟ ರಾಜು ಶ್ರೀವಾಸ್ತವ್​ ಆರೋಗ್ಯದಲ್ಲಿ ಚೇತರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಉತ್ತರ ಪ್ರದೇಶದ ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಅವರ ಆಪ್ತ ಕಾರ್ಯದರ್ಶಿ ಗರ್ವಿತ್ ನರಂಗ್ ತಿಳಿಸಿದ್ದಾರೆ.

ಆಗಸ್ಟ್ 10ರಂದು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಘಾತಕ್ಕೊಳಗಾಗಿ ಅವರು ಕುಸಿದು ಬಿದ್ದಿದ್ದರು. ಅಂದಿನಿಂದ ಏಮ್ಸ್​ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಅವರ ಬ್ರೇನ್​ ಸಂಪೂರ್ಣವಾಗಿ ಡೆಡ್​​ ಆಗಿದೆ ಎಂದು ಹೇಳಲಾಗಿತ್ತು. ಬಳಿಕ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆಂದು ತಿಳಿಸಲಾಯಿತು.

ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಅವರಿಗೆ ಪ್ರಜ್ಞೆ ಬಂದಿದೆ ಎಂದು ಗರ್ವಿತ್ ನರಂಗ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!