ಅಮ್ ಆದ್ಮಿ ಪಕ್ಷಕ್ಕೆ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ನಾಳೆ ಅಮ್ ಆದ್ಮಿ ಪಕ್ಷವನ್ನು ( Am Admi Party ) ಸೇರ್ಪಡೆಗೊಳ್ಳಲಿದ್ದಾರೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಎಎಪಿ ಪಕ್ಷವು ಎಲ್ಲಡೆ ಬಲಿಷ್ಠವಾಗುತ್ತಾ ಗಮನಹರಿಸುತ್ತಿದೆ.
ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡ ಚಲನಚಿತ್ರರಂಗದ ಹೆಸರಾಂತ ಹಾಸ್ಯ ಕಲಾವಿದ ಟೆನಿಸ್ ಕೃಷ್ಣ ರವರು ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವ ವಿಚಾರವನ್ನು ತಿಳಿಸಲು ಹರ್ಷಿಸುತ್ತೇವೆ.
ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಖಾಸಗೀ ಹೋಟೆಲ್ ನಲ್ಲಿ ಎಎಪಿ ಪಕ್ಷಕ್ಕೆ ಅಧಿಕೃತವಾಗಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!