ಐಎನ್​ಎಸ್ ವಿಕ್ರಾಂತ್ ಕಾರ್ಯಾರಂಭ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೈರಾಮ್ ರಮೇಶ್

ಹೊಸದಿಗಂತ ವರದಿ,ಧಾರವಾಡ:

ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭದ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಐಎನ್‌ಎಸ್ ವಿಕ್ರಾಂತ್ ನಿರ್ಮಾಣವಾಗಿದ್ದು 1999 ರಿಂದ ಎಲ್ಲಾ ಸರ್ಕಾರಗಳ ಸಾಮೂಹಿಕ ಪ್ರಯತ್ನವಾಗಿದೆ ಎಂದು ಪ್ರಧಾನಿ ಒಪ್ಪಿಕೊಳ್ಳುತ್ತಾರೆಯೇ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಭಾರತದ ಪ್ರಥಮ ಸ್ವದೇಶಿ ವಿಮಾನವಾಹಕ ನೌಕೆ ಐಎನ್​ಎಸ್​ ವಿಕ್ರಾಂತ್ 1999 ರಿಂದ ಎಲ್ಲಾ ಸರ್ಕಾರಗಳ ಸಾಮೂಹಿಕ ಪ್ರಯತ್ನದ ಫಲವಾಗಿ ಇಂದು ಕಾರ್ಯಾಚರಣೆ ಆರಂಭಿಸಿದೆ. ಇದನ್ನು ಪ್ರಧಾನಮಂತ್ರಿ ಒಪ್ಪಿಕೊಳ್ಳುವರೇ? 1971 ರ ಯುದ್ಧದಲ್ಲಿ ನಮಗೆ ಉತ್ತಮ ಸೇವೆ ಸಲ್ಲಿಸಿದ ಮೂಲ ಐಎನ್​ಎಸ್​ ವಿಕ್ರಾಂತ್ ಅನ್ನು ಸಹ ನೆನಪಿಸಿಕೊಳ್ಳೋಣ. ತುಂಬಾ ಟೀಕೆಗೊಳಗಾದ ಕೃಷ್ಣ ಮೆನನ್ ಅದನ್ನು ಯುಕೆಯಿಂದ ಭಾರತಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಕೊಚ್ಚಿಯ ಕೊಚ್ಚಿ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಐಎನ್‌ಎಸ್ ವಿಕ್ರಾಂತ್‌ಗೆ ಚಾಲನೆ ನೀಡಿದರು. ಐಎನ್​ಎಸ್​ ವಿಕ್ರಾಂತ್ 1990 ರ ದಶಕದ ಅಂತ್ಯದಲ್ಲಿ ನಿರ್ಗಮನವಾಗಿತ್ತು ಮತ್ತು ವಿಮಾನವಾಹಕ ನೌಕೆಯ ವಿನ್ಯಾಸ, ನಿರ್ಮಾಣವನ್ನು 2003 ರಲ್ಲಿ ಮಂಜೂರು ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!