ಹೊಸದಿಗಂತ ವರದಿ ಶಿವಮೊಗ್ಗ:
ನಿನ್ನೆ-ಮೊನ್ನೆವರೆಗೆ ಗಲ್ಲಿಯಲ್ಲಿ ಕ್ರಿಕೆಟ್ ಆಡುತ್ತಿದ್ದ ಹುಡುಗರು ಕೈಯಲ್ಲಿ ಚಾಕು-ಚೂರಿ ಹಿಡಿದು ಓಡಾಡುತ್ತಿರುವುದು ಆತಂಕಕಾರಿ ಸಂಗತಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಸೋಮವಾರ ಚೂರಿ ಇರಿತಕ್ಕೆ ಒಳಗಾದ ಪ್ರೇಮ್ಕುಮಾರ್ ಸಿಂಗ್ ಆರೋಗ್ಯವನ್ನು ಮೆಗ್ಗಾನ್ ಆಸ್ಪತ್ರೆಗೆ ತೆರಳಿ ವಿಚಾರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ, ಯಾರು ಏನು ಬೇಕಾದರೂ ಮಾಡಬಹುದು ಎಂಬ ಮನಸ್ಥಿತಿಗೆ ಕೆಲವರು ಬಂದಿರುವ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಶಿವಮೊಗ್ಗದಲ್ಲಿ ವ್ಯವಸ್ಥೆ ಸರಿ ಪಡಿಸಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
ಪ್ರೇಮ್ ಸಿಂಗ್ ಇನ್ನು 10 ನಿಮಿಷ ತಡವಾಗಿ ಆಸ್ಪತ್ರೆಗೆ ಬಂದಿದ್ದರೂ ಪರಿಸ್ಥಿತಿ ಬೇರೆಯದೇ ಆಗಿರುತ್ತಿತ್ತು. ವೈದ್ಯರ ಶ್ರಮದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಹಿಂದೆ ಮತೀಯ ಸಂಘಟನೆಗಳ ಕೈವಾಡ ಇರುವುದು ಸ್ಪಷ್ಟ ಎಂದರು.