ಹೊಸ ದಿಗಂತ ವರದಿ, ಚಿತ್ರದುರ್ಗ:
ಶಿವಮೊಗ್ಗ ಶಾಸಕರು ಹಾಗೂ ಚಿತ್ರದುರ್ಗದ ಲೋಕಸಭಾ ಚುನಾವಣಾ ಉಸ್ತುವಾರಿ ಎಸ್.ಎನ್.ಚನ್ನಬಸಪ್ಪ ಅವರು ಭಾನುವಾರ ಚಿತ್ರದುರ್ಗ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಕಾರ್ಯಕರ್ತರು ಇಂದಿನಿಂದಲೇ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಮನೆ, ಮನೆಗೆ ತಿಳಿಸುವ ಕೆಲಸ ಮಾಡಬೇಕು. ಆ ಮೂಲಕ ಮತದಾರರನ್ನು ಬಿಜೆಪಿ ಪಕ್ಷದತ್ತ ಒಲವು ಮೂಡುವಂತೆ ಮಾಡಬೇಕೆಂದು ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಬೇಕಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರು ಸೈನಿಕರಂತೆ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯರ್ತರೂ ಶ್ರಮವಹಿಸಿ ಕೆಲಸ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವವವರೆಗೂ ಯಾವುದೇ ಕಾರಣಕ್ಕೂ ವಿರಮಿಸಬಾರದು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಅಧ್ಯಕ್ಷತೆ ವಹಿಸಿದ್ದರು. ನಗರ ಮಂಡಲದ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಯುವ ಮುಖಂಡರಾದ ಡಾ.ಸಿದ್ದಾರ್ಥ್ ಗುಂಡಾರ್ಪಿ, ಸಂಪತ್ ಕುಮಾರ್, ನಾಗರಾಜ್ ಬೇದ್ರೆ, ಶಿವಣ್ಣಾಚಾರ್, ಶಂಭು ಜೆ.ಎಸ್., ಚಂದ್ರಿಕಾ ಲೋಕನಾಥ್, ಶ್ಯಾಮಲಾ ಶಿವಪ್ರಕಾಶ್, ಶೈಲಜಾ ರೆಡ್ಡಿ, ಶಾಂತಮ್ಮ, ಕೃಷ್ಣ, ಅರುಣ, ಕವನ, ಲೀಲಾ, ಕಿರಣ್, ಯಶವಂತ್, ತಿಪ್ಪೇಸ್ವಾಮಿ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.