ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದು, ಇದೀಗ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಹುಲಿ ಉಗುರಿನ ಪೆಂಡೆಂಟ್ ವಿಷಯ ಇದೀಗ ಮುನ್ನೆಲೆಗೆ ಬಂದಿದ್ದು, ನಟ ದರ್ಶನ್ ಹಾಗೂ ವಿಜಯ್ ಗುರೂಜಿ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಇದೀಗ ನಟ ಜಗ್ಗೇಶ್ ವಿಡಿಯೋ ಒಂದು ವೈರಲ್ ಆಗಿದ್ದು, ಜಗ್ಗೇಶ್ ವಿರುದ್ಧವೂ ದೂರು ದಾಖಲಾಗಿದೆ.
ಮಾಜಿ ಎಂಎಲ್ಸಿ ಪಿಆರ್ ರಮೇಶ್ ಎನ್ನುವವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದು ಒರಿಜಿನಲ್ ಹುಲಿ ಉಗುರು ಎಂದು ಜಗ್ಗೇಶ್ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ಜಗ್ಗೇಶ್ಗೂ ಸಂಕಷ್ಟ ಕಾದಿದೆ ಎನ್ನಲಾಗಿದೆ.
ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.