ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಪ್ರತಿಷ್ಠಿತ ನಿರ್ವಹಣಾ ಸಂಸ್ಥೆಯೊಂದರಲ್ಲಿ ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಸ್ವಯಂ ಘೋಷಿತ ದೇವಮಾನವ, ಪಾರ್ಥ ಸಾರಥಿ ಎಂದು ಕರೆಯಲ್ಪಡುವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆಗಸ್ಟ್ 4 ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಔಪಚಾರಿಕ ದೂರಿನ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ನಿರ್ವಹಣಾ ಸಮಿತಿಯ ಸದಸ್ಯ ಎಂದು ನಂಬಲಾದ ಆರೋಪಿಯು ಈ ಪ್ರಕರಣ ಹೊರಬಿದ್ದಾಗಿನಿಂದ ತಲೆಮರೆಸಿಕೊಂಡಿದ್ದಾನೆ.
ತನಿಖೆಯ ಸಮಯದಲ್ಲಿ, ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ವಿದ್ಯಾರ್ಥಿವೇತನದಡಿಯಲ್ಲಿ ದಾಖಲಾದ 32 ಪಿಜಿಡಿಎಂ ವಿದ್ಯಾರ್ಥಿಗಳಿಂದ ಪೊಲೀಸರು ಹೇಳಿಕೆಗಳನ್ನು ದಾಖಲಿಸಿದ್ದಾರೆ. ಈ ಪೈಕಿ 17 ವಿದ್ಯಾರ್ಥಿಗಳು ಪಾರ್ಥ ಸಾರಥಿ ನಿಂದನೀಯ ಭಾಷೆ ಬಳಸಿದ್ದಾನೆ, ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಮತ್ತು ಅನಗತ್ಯ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್)ಯ ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.