ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಬಿಜೆಪಿ ವತಿಯಿಂದ ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಕೆಲವು ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟಿರುವ ಕಾಂಗ್ರೆಸ್ ಪಕ್ಷವು ಸುಳ್ಳು ರೇಟ್ ಕಾರ್ಡ್, ಭ್ರಷ್ಟಾಚಾರದ ಆರೋಪ ಮಾಡಿದ್ದು, ಇದರ ವಿರುದ್ಧ ತೀವ್ರ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ಬಿಜೆಪಿ ಸರಕಾರವನ್ನು ಟ್ರಬಲ್ ಎಂಜಿನ್ ಸರಕಾರ ಎಂದು ಕರೆಯಲಾಗಿದೆ. 40 ಶೇಕಡಾ ಸರಕಾರ ಎಂದು ಸಂಬೋಧಿಸಿದ್ದು, ಇದರ ವಿರುದ್ಧ ಕ್ರಮಕ್ಕೆ ಕೋರಲಾಗಿದೆ.
ಈ ಜಾಹೀರಾತುಗಳು ಸುಳ್ಳು ಮಾಹಿತಿಯಿಂದ ಕೂಡಿವೆ ಹಾಗೂ ಜನರನ್ನು ತಪ್ಪು ದಾರಿಗೆ ಎಳೆಯುವಂತಿವೆ ಎಂದು ಗಮನ ಸೆಳೆಯಲಾಗಿದೆ. ರಾಜ್ಯ ಉಪಾಧ್ಯಕ್ಷ ನಂದೀಶ್ ರೆಡ್ಡಿ ಅವರ ಹೆಸರಿನಲ್ಲಿ ಈ ದೂರನ್ನು ದಾಖಲಿಸಿದ್ದು, ಕೂಡಲೇ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ.