April 11, 2026
Saturday, April 11, 2026
spot_img

ಬೆಂಗಳೂರಿನ ಪ್ರವಾಹ ಕಾಮಗಾರಿಯನ್ನು ಮೇ.30ರೊಳಗೆ ಮುಗಿಸಿ: ಅಧಿಕಾರಿಗಳಿಗೆ ಖಡಕ್‌ ವಾರ್ನಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇನ್ನೇನು ಕೆಲವೇ ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಮೇ. 30ರೊಳಗೆ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು, ಇಲ್ಲವಾದರೆ ಅಮಾನತು ಮಾಡಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಯಲಹಂಕದ ಕೇಂದ್ರಿಯ ವಿಹಾರ, ಟಾಟಾ ನಗರ, ಹೆಬ್ಬಾಳ, ಮನ್ಯತಾ ಟೆಕ್ ಪಾರ್ಕ್, ಎಚ್‌ಬಿಆರ್ ಲೇಔಟ್, ಗೆದ್ದಲಹಳ್ಳಿ, ನಾಗವಾರ, ಸಾಯಿ ಲೇಔಟ್ ಮತ್ತು ಸಿಲ್ಕ್ ಬೋರ್ಡ್ ಸೇರಿದಂತೆ ಪ್ರವಾಹ ಸಮಸ್ಯೆ ಇರುವ ಪ್ರದೇಶಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಕಲ್ಲುಗಳ ಇರುವಿಕೆಯಿಂದ ಕಾಮಗಾರಿ ವಿಳಂಬವಾಗಿದೆ ಎಂದು ಎಂಜಿನಿಯರ್ ತಿಳಿಸಿದ್ದಾರೆ. ಅವರು ಅಕ್ಟೋಬರ್ ತನಕ ಸಮಯ ಕೇಳಿದ್ದಾರೆ. ಅಷ್ಟೊರೊಳಗೆ ಪೂರ್ಣಗೊಳಿಸದಿದ್ದರೆ ಅಮಾನತಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !