ಹೊಸದಿಗಂತ ವರದಿ ಹುಬ್ಬಳ್ಳಿ:
ಒಡಿಸ್ಸಾ ರೈಲು ದುರಂತ ಬಹಳಷ್ಟು ದುರ್ದೈವ ಸಂಗತಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಭಾರತೀಯ ರೈಲ್ವೆಯಲ್ಲಿ ಯಾವುದೇ ಅಪಘಾತ ನಡೆದಿದ್ದಿಲ್ಲ. ಈ ದೊಡ್ಡ ಅಪಘಾತ ಬಹಳ ನೋವು ತರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯ ಮಾಡುತ್ತಿದೆ. ಬಹಳಷ್ಟು ಜಾಗೃತರಾಗಿದ್ದರು. ಈ ಅಪಘಾತ ನಡೆದಿದೆ. ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಯಲಿದೆ ಎಂದರು.