ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ ಹನುಮಾನ್ ಚಾಲೀಸಾ ಹೇಳೋಕೆ ಬರೋದಿಲ್ಲ ಎನ್ನುವ ಹೇಳಿಕೆ ಹಾಗು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಅಂಶವನ್ನು ವಿರೋಧಿಸಿ ಬಜರಂಗದಳ ಹಾಗೂ ಬಿಜೆಪಿ ಮುಖಂಡರು ಇಂದು(ಗುರುವಾರ) ರಾಜ್ಯದ ಹಲವೆಡೆ ಆಂಜನೇಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ರಾಮಮಂದಿರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗಮಿಸಿ ರಾಮ ಹಾಗೂ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹನುಮಾನ್ ಚಾಲೀಸಾ ಪಠಿಸಿದ್ದಾರೆ.
ವಿವಿದೆಡೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಅಂಶವನ್ನು ಪ್ರಕಟಿಸಿರುವುದನ್ನು ಖಂಡಿಸಿ ಹನುಮಾನ್ ಚಾಲೀಸಾ ಪಾರಾಯಣ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳು ಮತ್ತು ಮಂದಿರಗಳಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ ನಡೆಯಿತು
ಬಿಜೆಪಿ ಮುಖಂಡರು, ಬಜರಂಗದಳ ಮತ್ತು ವಿಶ್ವಹಿಂದು ಪರಿಷತ್ನ ಕಾರ್ಯಕರ್ತರು ಶ್ರದ್ಧೆಯಿಂದ ಪಾಲ್ಗೊಂಡಿದ್ದರು.