ಪ್ರವೀಣ್‌ ಹತ್ಯೆಗೆ ಖಂಡನೆ: ಬಾಗಲಕೋಟೆ ಯುವ ಮೋರ್ಚಾ 12 ಮಂಡಳಿಗಳ ಪದಾಧಿಕಾರಿಗಳು ರಾಜೀನಾಮೆ

ಹೊಸದಿಗಂತ ವರದಿ, ಬಾಗಲಕೋಟೆ :

ದಕ್ಷಿಣ ಕನ್ನಡ ಜಿಲ್ಲೆಯ, ಸುಳ್ಯ ತಾಲ್ಲೂಕಿನ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರು ಭೀಕರವಾಗಿ ಹತ್ಯೆಗೀಡಾಗಿರುವುದನ್ನು ಖಂಡಿಸಿ ಬಾಗಲಕೋಟೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ೧೨ ಮಂಡಳಿಗಳ ಪದಾಧಿಕಾರಿಗಳು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ರಿಗೆ ಸಂಜೆ‌ರಾಜೀನಾಮೆ ಪತ್ರ ನೀಡಲು ಇಂದು ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಾಮಾಜಿಕ ಜಾಲತಾಣದ ಮುಖಂಡ ಪಂಕಜ ನಿಕ್ಕಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದರು ಕಠಣ ಕ್ರಮದ ಭರವಸೆ ನೀಡಲಾಗುತ್ತಿದೆ. ಯಾವುದೇ ಕ್ರಮ ಆಗುತ್ತಿಲ್ಲ ಎಂದುತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!