ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮಜನ್ಮಭೂಮಿಯ ಕರಸೇವಕ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಹಿನ್ನಲೆ ಜ.9 ರಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY vijayendra)ನೇತೃತ್ವದಲ್ಲಿ ನಿಗದಿಯಾಗಿದ್ದ ಪ್ರತಿಭಟನೆಯನ್ನು ರಾಜ್ಯ ಬಿಜೆಪಿ ಘಟಕ ಕೈಬಿಟ್ಟಿದೆ.
ಶ್ರೀಕಾಂತ್ ಬಿಡುಗಡೆಗೆ ಆಗ್ರಹಿಸಿ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿತ್ತು. ಆದರೀಗ ಜಾಮೀನು ಮಂಜೂರಾದ ಹಿನ್ನೆಲೆ ಠಾಣೆಗೆ ಮುತ್ತಿಗೆ ಹಾಕುವುದನ್ನು ರದ್ದುಪಡಿಸಿದೆ.
ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಬಂದ ನಂತರ ದಾಖಲೆಗಳನ್ನು 5 ಮತ್ತು 3ನೇ ಜೆಎಮ್ಎಫ್ಸಿ ನ್ಯಾಯಾಲಕ್ಕೆ ನೀಡಬೇಕು. ಬಳಿಕ ಆ ತೀರ್ಪು ಆದೇಶವನ್ನ ಈ ಎರಡೂ ಕೋರ್ಟ್ಗಳಿಗೆ ತಲುಪಿಸಬೇಕು. ನಂತರ ಸಂಜೆ 6 ಗಂಟೆಯೊಳಗೆ ತೀರ್ಪಿನ ಆದೇಶ ಜೈಲು ಅಧಿಕಾರಿಗಳ ಕೈ ಸೇರಬೇಕು. ಸಮಯದ ಅಭಾವದಿಂದ ತೀರ್ಪು ಆದೇಶ ಕೈ ಸೇರುವುದು ತಡವಾದರೆ ಶ್ರೀಕಾಂತಗೆ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗುತ್ತಿದೆ.