Monday, October 2, 2023

Latest Posts

ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯ: ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯ ಬಳಿಕ ಅಂತಿಮ ನಿರ್ಧಾರ ಹೊರಬೀಳಲಿದೆ.

ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ಯಾರಂಟಿಗಳಿಗೆ ಷರತ್ತು ಅನ್ವಯವಾಗುವ ಕುರಿತು ಸುಳಿವು ನೀಡಿದ್ದಾರೆ. ಷರತ್ತುಗಳಿಲ್ಲದೆ ಸರ್ಕಾರಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. ಬಿಪಿಎಲ್ ಕಾರ್ಡ್ ಇರೋರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಹೇಳಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ನೇತತ್ವದ ಸಚಿವ ಸಂಪುಟ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಲಾಖಾವಾರು ಅಧಿಕಾರಿಗಳು ಈಗಾಗಲೇ ತಮ್ಮ ಇಲಾಖೆಗೆ ಸಂಬಂಧಪಟ್ಟ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಇಂದು ಸಭೆಯಲ್ಲಿ ಚರ್ಚೆ ನಡೆಸಿ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!