ಪ್ರವೀಣ್ ಕುಟುಂಬಕ್ಕೆ ಶಿವಗಿರಿ ಮಠದ ಸ್ವಾಮೀಜಿ ಸಾಂತ್ವನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭ ಬೆಳಗಾವಿ ಮಹಾಲಕ್ಷ್ಮಿ ಮಹಾಸಂಸ್ಥಾನ ಸದ್ದರ್ಮ ಪೀಠದ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ, ನವೀನ್ ಚಂದ್ರ ಮಂಗಳೂರು, ಮಂಗಳೂರು ಚಂದ್ರು ಸುರಗುಪ್ಪೆ ಕಿರಣ್ ಕುಮಾರ್, ಮಂಗಳೂರು ರಾಮ ಸೇನೆಯ ಸದಸ್ಯರು  ಜೊತೆಗಿದ್ದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಪ್ರವೀಣ್ ಅವರ ಹತ್ಯೆ ಖಂಡನೀಯ. ದೇಯಿ ಬೈದೆತಿ ಹಾಗೂ ಕೋಟೆ ಚೆನ್ನಯರು ಅಗಲಿದ ದಿವ್ಯ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಮನೆಯವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸ್ವಾಮೀಜಿ ಪ್ರಾರ್ಥಿಸಿದರು . ಹಾಗೆಯೇ ಹಂತಕರಿಗೆ ಗಲ್ಲು ಶಿಕ್ಷೆ ಆಗಬೇಕು, ಪ್ರವೀಣ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಅವರು ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!