ಹೊಸದಿಗಂತ ಡಿಜಿಟಲ್ ಡೆಸ್ಕ್
ಶಾರುಖ್ ಖಾನ್ ಅವರ ಹೊಸ ಸಿನಿಮಾ ನಿರ್ಮಾಣಕ್ಕೆ ಹೊಂಬಾಳೆ ಫಿಲ್ಮ್ಸ್ಸಂಸ್ಥೆ ಮುಂದಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಅತಿಥಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.
ಕೆಜಿಎಫ್ 1, ಕೆಜಿಎಫ್ 2 ಮತ್ತು ಕಾಂತಾರ ಸಿನಿಮಾ ಮೂಲಕ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿರೋ ನಿರ್ಮಾಪಕ ವಿಜಯ್ ಕಿರಂಗದೂರ್ ಈಗ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಬಾಲಿವುಡ್ನಲ್ಲಿ ನಟನಾಗಿ, ನಿರ್ಮಾಪಕನಾಗಿ ಸಾಕಷ್ಟು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಶಾರುಖ್ ಖಾನ್ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಮಾಡಿಲ್ಲ.
ಇದೀಗ ಸಾಲು ಸಾಲು ಸಿನಿಮಾದಲ್ಲಿ ಶಾರುಖ್ ಬ್ಯುಸಿ ಆಗಿದ್ದು, ಪಠಾಣ್, ಜವಾನ್, ಟೈಗರ್ 3, ಡುಂಕಿ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನೌದ್ವೇ ಇದೀಗ ಹೊಂಬಾಳೆ ಫಿಲ್ಸ್ಮ್ ನಿಂದ ನಿರ್ಮಾಣವಾಗುತ್ತಿರುವ ಹೊಸ ಸಿನಿಮಾಗೆ ಶಾರುಖ್ ಅಭಿನಯಿಸಲಿದ್ದಾರೆ ಅನ್ನೋ ವಿಷಯ ಗಾಂಧಿನಗರದಿಂದ ಹಿಡಿದು ಬಾಲಿವುಡ್ವರೆಗೂ ಸೌಂಡ್ ಮಾಡುತ್ತಿದೆ.
ಈ ಚಿತ್ರದಲ್ಲಿ ಕಾಂತಾರದ ರಿಷಬ್ ಶೆಟ್ಟಿ ಮತ್ತು ಚಾರ್ಲಿಯ ರಕ್ಷಿತ್ ಶೆಟ್ಟಿ ಅತಿಥಿ ಪಾತ್ರಗಳಲ್ಲಿ ನಟಿಸಲಿದ್ದಾರೆ. ಬಾಲಿವುಡ್ನ ಸ್ಟಾರ್ ಡೈರೆಕ್ಟರ್ಗಳಲ್ಲೊಬ್ಬರಾದ ರೋಹಿತ್ ಶೆಟ್ಟಿ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.