ಹೊಸದಿಗಂತ ಡಿಜಿಟಲ್ ಡೆಸ್ಕ್
ದೇಶದಲ್ಲಿ ಬಾರಿ ಸದ್ದು ಮಾಡುತ್ತಿರುವ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದು, ಕಾಶ್ಮೀರಿ ಹಿಂದೂಗಳ ಬಲವಂತದ ವಲಸೆ ಮತ್ತು ಸಮುದಾಯ ಎದುರಿಸಿದ ಅನ್ಯಾಯವನ್ನು ಆಧರಿಸಿದೆ ಸಿನಿಮಾಕ್ಕೆ ಎಲ್ಲರೂ ಮನಸೋತಿದ್ದಾರೆ.
ಇನ್ನು ಚಿತ್ರ ಕುರಿತು ಬಾಲಿವುಡ್ ಸ್ಟಾರ್ ಅಮಿರ್ ಖಾನ್ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ನಾನು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲ. ಆದರೆ ಚಿತ್ರ ಯಶಸ್ಸಿನ ಮಾರ್ಗದಲ್ಲಿ ಮುಂದೆ ಹೋಗುತ್ತಿದೆ ಎನ್ನುವ ಅಭಿಪ್ರಾಯಗಳನ್ನು ಕೇಳಿದ್ದೇನೆ. ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಜಮ್ಮು – ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯೆ ಮತ್ತು ಅವರ ವಲಸೆ ಕುರಿತಾದ ಈ ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಸೇರಿ ಹಲವರು ಅಭಿನಯಿಸಿದ್ದಾರೆ.