ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗರಂ ಆಗಿದ್ದು, ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಲ್ಲಂನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಸಿಎಎಯನ್ನು ಉದ್ದೇಶಪೂರ್ವಕ ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್ಗೆ ಭಯ ಇದೆ ಎನ್ನುವುದನ್ನು ಇದು ಸ್ಪಷ್ಪಡಿಸುತ್ತದೆ ಎಂದು ಆರೋಪಿಸಿದರು.
ಅಧಿಕಾರಕ್ಕೆ ಬಂದರೆ ಜಿಎಸ್ಟಿ ಸಹಿತ ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ಈಗಾಗಲೇ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ. ಈ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್ ಭಯ ಇದೆ ಎಂದು ಆವರು ಹೇಳಿದರು.