ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಸಿದುಕೊಂಡು ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಮತ್ತು I.N.D.I.A ಬಣವು ಗುಪ್ತ ಅಜೆಂಡಾವನ್ನು ಹೊಂದಿದೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಹೇಳಿದ್ದಾರೆ.
ಎಸ್ಸಿ, ಎಸ್ಟಿ, ಒಬಿಸಿ ಹಕ್ಕುಗಳನ್ನು ಕಸಿದು ಮುಸ್ಲಿಮರಿಗೂ ನೀಡುವುದು ಕಾಂಗ್ರೆಸ್ ಮತ್ತು I.N.D.I.A ಮೈತ್ರಿಕೂಟದ ಹಿಡನ್ ಅಜೆಂಡಾ. ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಕಾಂಗ್ರೆಸ್ ಹೇಳುತ್ತಿದೆ.
ಅಲ್ಪಸಂಖ್ಯಾತರಿಗೆ, ವಿಶೇಷವಾಗಿ ಮುಸ್ಲಿಮರಿಗೆ ಆದ್ಯತೆ ನೀಡಬೇಕು ಮತ್ತು ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಅವರದಾಗಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಎಂದು ನಡ್ಡಾ ಹೇಳಿದರು.
ಸಾಚಾರ್ ಸಮಿತಿ ವರದಿಯ ಮೂಲಕ ಸುಳ್ಳು ಹೇಳಿಕೆಗಳನ್ನು ನೀಡಲಾಗಿದೆ ಮತ್ತು ಮುಸ್ಲಿಮರು ದಲಿತರಿಗಿಂತ ಕೆಟ್ಟ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಇದರರ್ಥ ಮುಸ್ಲಿಮರನ್ನು ಎಸ್ಸಿ ಎಂದು ಘೋಷಿಸಲು ಮತ್ತು ಅವರಿಗೆ ಎಸ್ಸಿ ಮೀಸಲಾತಿ ಸೌಲಭ್ಯಗಳನ್ನು ಒದಗಿಸಲು ಕಾಂಗ್ರೆಸ್ ಈಗಾಗಲೇ ಮೂಲವನ್ನು ಸೃಷ್ಟಿಸುತ್ತಿದೆ” ಎಂದು ಹೇಳಿದ್ದಾರೆ.