April 2, 2026
Thursday, April 2, 2026
spot_img

ಅಸ್ಸಾಂ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ: ಜನರಿಗೆ ರಾಹುಲ್ ಗಾಂಧಿ ನೀಡಿದ 11 ಭರವಸೆಗಳೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಅಸ್ಸಾಂ ಚುನಾವಣಾ ಅಖಾಡ ರಂಗೇರುತ್ತಿದ್ದು, ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯಲು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಅಸ್ಸಾಂ ಜನತೆಗಾಗಿ ಆಡಳಿತ, ಗುರುತು, ಆರೋಗ್ಯ ರಕ್ಷಣೆ, ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕೀಕರಣ, ಕೃಷಿ, ಗ್ರಾಮೀಣ ಮತ್ತು ನಗರಾಭಿವೃದ್ಧಿ ಮತ್ತು ಹವಾಮಾನ ಬದಲಾವಣೆಯಂತಹ 11 ಭರವೆಸೆಗಳನ್ನು ನೀಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ,ಕಾರ್ಪೊರೇಟ್‌ಗಳಿಗೆ ದೊಡ್ಡ ಭೂ ಹಂಚಿಕೆಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಮಾರ್ಚ್ 29 ರಂದು ಮಲ್ಲಿಕಾರ್ಜುನ ಖರ್ಗೆ ಅವರು, ಜುಬೀನ್ ಗರ್ಗ್ ಸಾವಿನ ಪ್ರಕರಣದ ತನಿಖೆ, ಆರೋಗ್ಯ ವಿಮೆ ಸಹಿತ ಐದು ಗ್ಯಾರಂಟಿಗಳನ್ನ ಬಿಡುಗಡೆ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !