ಹೊಸ ದಿಗಂತ ಮಂಗಳೂರು:
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ತಮ್ಮ ನಿವಾಸದ ಸಮೀಪದಲ್ಲೇ ಇರುವ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ಮತದಾರರಿಂದ ಲಭ್ಯವಾಗಿದೆ. ಕ್ಷೇತ್ರದ ಎಲ್ಲೆಡೆಯಿಂದ ಉತ್ತಮ ಬೆಂಬಲ ಸಿಕ್ಕಿದೆ. ಈ ಚುನಾವಣೆಯನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದರು.
ಸಹೋದರಿಯರಾದ ಸರೋಜಿನಿ ಹೆಗ್ಡೆ, ಶಶಿಕಲಾ ಹೆಗ್ಡೆ ಅವರೊಂದಿಗೆ ಮತಗಟ್ಟೆಗೆ ಆಗಮಿಸಿದ ಅವರು, ಚುನಾವಣೆ ಆರಂಭದ ಮೊದಲ ಸರತಿಯಲ್ಲಿ ನಿಂತು ಮತದಾನ ಮಾಡಿದ್ದಾರೆ.