ಕಾಂಗ್ರೆಸ್​ನ “ಸರ್ವ ಜನಾಂಗದ ಶಾಂತಿಯ ತೋಟ” ಪ್ರಣಾಳಿಕೆ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಈಗಾಗಲೇ ಹಲವು ಗ್ಯಾರಂಟಿ ಘೋಷಣೆಯ ಮೂಲಕ ಹಲವು ಭರವಸೆಯನ್ನ ನಾಡಿನ ಜನರಿಗೆ ನೀಡಿದ್ದು, ರಾಜ್ಯ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ (ಶಾಂಗ್ರಿಲಾ) ನಡೆದ ಸಮಾರಂಭದಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿಗೆ ಠಕ್ಕರ್‌ ಕೊಡಲು ಮತದಾರರ ಓಲೈಸಲು ಭರಪೂರ ಯೋಜನೆಗಳನ್ನು ಘೋಷಿಸಿದೆ.

ಸರ್ವ ಜನಾಂಗದ ಶಾಂತಿಯ ತೋಟ,ಇದುವೆ ಕಾಂಗ್ರೆಸ್‌ ಬದ್ದತೆ, ಕಾಂಗ್ರೆಸ್‌ ಬರಲಿದೆ ಬದಲಾವಣೆ ತರಲಿದೆ ಎಂಬ ಘೋಷವಾಕ್ಯದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಮುಂದಿನ 25 ವರ್ಷಗಳ ದೃಷ್ಟಿಕೋನ ಇಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!