ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧ ಕೇವಲ ಸಿಎಂ ಸಿದ್ದರಾಮಯ್ಯ ವಿರುದ್ಧವಷ್ಟೇ ನನ್ನ ಹೋರಾಟ ಅಲ್ಲ. ನಡೆದಿರುವ ಅಕ್ರಮಗಳ ವಿರುದ್ಧ ತನಿಯಾಗಬೇಕು. ಯಾರೆಲ್ಲ ಶಾಮೀಲಾಗಿದ್ದಾರೋ ಅವರೆಲ್ಲರ ವಿರುದ್ಧ ತನಿಖೆ ನಡೆದು ಕ್ರಮವಾಗಬೇಕು ಎಂಬುದೇ ನನ್ನ ಆಶಯ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಅಲ್ಲದೆ, ಮುಡಾ ಹಗರಣ ಸಂಬಂಧ ದಾಖಲೆಗಳನ್ನು ಒದಗಿಸಿದವರಲ್ಲಿ ಕಾಂಗ್ರೆಸ್ನವರು ಕೂಡ ಇದ್ದಾರೆ ಎಂದು ಸ್ನೇಹಮಯಿ ಹೊಸ ಬಾಂಬ್ ಸಿಡಿಸಿದ್ದಾರೆ. ನೇರವಾಗಿ ಹೋರಾಟ ಮಾಡಲಾಗದೆ ಅನೇಕರು ನನ್ನ ಮೂಲಕ ಹೋರಾಟ ಮಾಡುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.