ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರಿದಿರುವಂತೆಯೇ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಹೈದ್ರಾಬಾದ್ಗೆ ಎಂಟ್ರಿ ನೀಡಿ ಪಕ್ಷದಲ್ಲಿ ಸಂಚಲನ ಮೂಡಿಸಿದ್ದಾರೆ.
ಸರಳ ಬಹುಮತಕ್ಕೆ ಬೇಕಿರುವ ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಳ್ಳುತ್ತಿರುವ ನಡುವೆಯೇ ಪಕ್ಷದ ಶಾಸಕರನ್ನು ಇತರ ಪಕ್ಷಗಳು ಸೆಳೆಯದಂತೆ ನೋಡಿಕೊಳ್ಳಲು ಕಾಂಗ್ರೆಸ್ನ ಈ ‘ಟ್ರಬಲ್ ಶೂಟರ್’ ಮುಂದಾಗಿದ್ದು, ಕಾಂಗ್ರೆಶ ನೂತನ ಶಾಸಕರಾಗಿ ಆಯ್ಕೆಯಾಗುವವರನ್ನ ಕರೆದೊಯ್ಯಲು ಹೈದ್ರಾಬಾದ್ನ ತಾಜ್ ಕೃಷ್ಣ ಹೋಟೆಲ್ನ ಹೊರಗೆ ಬಸ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಕಾಂಗ್ರೆಸ್ಗೆ 70 ಸ್ಥಾನಗಳಿಗಿಂತ ಕಡಿಮೆಯಾದರೆ, ಆ ಸಂದರ್ಬದಲ್ಲಿ ಶಾಸಕರನ್ನು ಬೆಂಗಳೂರು ಅಥವಾ ಇನ್ನೊಂದು ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ಶುಕ್ರವಾರವೇ ಮಾಧ್ಯಮಗಳು ವರದಿ ಮಾಡಿದ್ದವು. ಈನಡುವೆ ಡಿಕೆಶಿ ಭೇಟಿ ಕುತೂಹಕ್ಕೆ ಎಡೆಮಾಡಿಕೊಟ್ಟಿದ್ದು, ತೆಲಂಗಾಣದಲ್ಲಿ ಗೆದ್ದಿರುವ ಅಭ್ಯರ್ಥಿಗಳನ್ನು ವಿಶೇಷ ಬಸ್ಗಳಲ್ಲಿ ಕರ್ನಾಟಕಕ್ಕೆ ಕರೆದೊಯ್ಯುವ ಸಾಧ್ಯತೆ ಹೆಚ್ಚಾಗಿದೆ.