ಹೊಸದಿಗಂತ, ಶಿವಮೊಗ್ಗ:
ದಿಲ್ಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಹಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಶಾಸಕರಿಗೆ ವಿಮಾನ ಅಲ್ಲಿ ಉಳಿಯಲು ವ್ಯವಸ್ಥೆ ಊಟ ತಿಂಡಿ ವ್ಯವಸ್ಥೆ ಎಲ್ಲದಕ್ಕೂ ರಾಜ್ಯದ ನಾಗರಿಕರ ತೆರಿಗೆ ಹಣವನ್ನು ಬಳಕೆ ಮಾಡಿದ್ದಾರೆ ತೆರಿಗೆ ಹಣ ರಾಜಕಾರಣಕ್ಕೆ ಬಳಕೆ ಆಗಿರುವುದು ದುರದೃಶಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ನಡೆದಿರುವ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರು ಮತ್ತೆ ಉತ್ತರ ಭಾರತ ದಕ್ಷಿಣ ಭಾರತ ಎಂದು ನಿರ್ಣಯ ಮಂಡಿಸಿದ್ದಾರೆ. ಇದಕ್ಕೆ ಈಗಾಗಲೇ ಸಂಸದ ಡಿಕೆ ಸುರೇಶ್ ಪೀಠಿಕೆ ಹಾಕಿದ್ದರು. ಅದು ಪುನಃ ಮುಂದುವರೆದಿದೆ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತ ಅಖಂಡ ಭಾರತ ವಿಭಜನೆಯನ್ನು ಸಹಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೂ ಕಾಂಗ್ರೆಸ್ ನಲ್ಲಿ ಇಂತಹ ಹೇಳಿಕೆಗಳು ಬರುತ್ತವೆ ಕೂಡಲೇ ಖರ್ಗೆ ಅವರು ಡಿಕೆ ಸುರೇಶ್ ಮತ್ತು ವಿನಯ್ ಕುಲಕರಣಿ ಅವರನ್ನು ಪಕ್ಷದಿಂದ ಡಿಸ್ಮಿಸ್ ಮಾಡಬೇಕು ಎಂದು ಒತ್ತಾಯಿಸಿದರು.