ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 10ರ ಒಳಗೆ ಒಳಮೀಸಲಾತಿ ಘೋಷಣೆ ಮಾಡಿ ಮೇ 5ರಿಂದ ಒಳಮೀಸಲಾತಿ ಗಣತಿ ಪ್ರಾರಂಭ ಮಾಡಬೇಕು ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.
ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಒಳಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ. ಸರ್ಕಾರದ ಬಳಿಕ ಕಾಂತರಾಜು ವರದಿ ಅಂಕಿಅಂಶಗಳು ಇವೆ. ಅದರ ಆಧಾರದಲ್ಲಿ ಒಳಮೀಸಲಾತಿ ಕೊಡಬೇಕು, ಜೂನ್10ರ ಒಳಗೆ ಮೀಸಲಾತಿ ಕೊಡುತ್ತೇವೆ ಎಂಬ ಭರವಸೆ ಕೊಟ್ಟು ಗಣತಿ ಶುರು ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.