ನಾಳೆ ನಡೆಯಬೇಕಿದ್ದ ಕರ್ನಾಟಕ ಬಂದ್ ಹಿಂಪಡೆದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಇದೀಗ ಬಂದ್ ವಾಪಾಸ್ ಪಡೆಯುವುದಾಗಿ ಕಾಂಗ್ರೆಸ್ ಹೇಳಿದೆ.

ಗುರುವಾರ ಪಿಯುಸಿ ಪರೀಕ್ಷೆ ಇರುವ ಕಾರಣ ಕರ್ನಾಟಕ ಬಂದ್‌ನ್ನು ವಾಪಾಸ್ ಪಡೆಯಲಾಗಿದೆ. ನಾಳೆ ಪರೀಕ್ಷೆ ಇರುವ ಕಾರಣ ಬಂದ್ ವಾಪಾಸ್ ಪಡೆದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳು ಬಂದ್ ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದು, ಅವರ ಮಾತಿಗೆ ಓಗೊಟ್ಟು ಬಂದ್ ಹಿಂಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರನ ಭ್ರಷ್ಟಾಚಾರ ನಡೆ ವಿರೋಧಿಸಿ ಕಾಂಗ್ರೆಸ್ ಬಂದ್‌ಗೆ ಕರೆ ನೀಡಿತ್ತು. ಆದರೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಬಂದ್ ವಾಪಾಸ್ ಪಡೆದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!