ಕಾಂಗ್ರೆಸ್ ಗೆ ಎದುರಾಗಿದೆ ಕಾರ್ಯಕರ್ತರ ಬರಗಾಲ: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕಾಂಗ್ರೆಸ್ ಗೆ ಕಾರ್ಯಕರ್ತರ ಬರಗಾಲ ಎದುರಾಗಿದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದರು.

ಅವರು ಸೋಮವಾರ, ಉಡುಪಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಬೂತ್ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಟ್ಟೆ ಹೊಲಿಸಿದವರು ನಿರುದ್ಯೋಗಿಗಳಾಗುತ್ತರೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪಿದೆ. ರಾಷ್ಟ್ರೀಯ ಅಧ್ಯಕ್ಷರು ಬೂತ್ ಅಧ್ಯಕ್ಷ ಜೊತೆ ಮಾತನಾಡುವುದು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ. ರಾಜ್ಯದಲ್ಲಿ ಬಿಜೆಪಿ ೧೫೦ ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!