ಕಾಂಗ್ರೆಸ್ ನ ಪಾಪದ ಕೊಡ ತುಂಬಿದೆ, ಕರ್ಮದ ಫಲ ಅನುಭವಿಸಲೇ ಬೇಕು: ಜನಾರ್ದನ ರೆಡ್ಡಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಗೆ ಮತ್ತೆ ಕರ್ಮ ರಿಟರ್ನ್ಸ್ ಆಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಟೀಕಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಬಂಧನವನ್ನು ಕಾಂಗ್ರೆಸ್ ಸೇಡಿನ ನೀತಿ ಎಂದು ಪರಿಗಣಿಸುತ್ತಿದೆ. ಅಂದು ನನ್ನೊಂದಿಗೆ ಯಡಿಯೂರಪ್ಪ, ಜಗಮೋಹನ್ ರೆಡ್ಡಿ, ಕನಿಮೋಳಿ, ಅಮಿತ್ ಶಾ ಅವರನ್ನು ಬಂಧಿಸಲಾಗಿತ್ತು. ಕಾಂಗ್ರೆಸ್ ಪಕ್ಷವೇ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು.

ಒಳ್ಳೆಯದನ್ನು ಮಾಡಿದರೆ ಒಳ್ಳೆಯದಾಗುತ್ತದೆ. ನೀವು ಏನಾದರೂ ಕೆಟ್ಟದ್ದನ್ನು ಮಾಡಿದರೆ ಅದು ಕೆಟ್ಟದ್ದಾಗಿರುತ್ತದೆ. ಈಗ ಕಾಂಗ್ರೆಸ್ ಪಾಪದ ಕೊಡ ತುಂಬಿದೆ. ಖಂಡಿತ ಕರ್ಮದ ಫಲ ಸಿಗಲಿದೆ ಎಂದು ರೆಡ್ಡಿ ತಿರುಗೇಟು ನೀಡಿದರು.

ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಾಂಗ್ರೆಸ್ ನವರೇ ಸೋಲಿಸುತ್ತಾರೆ. ಸೋಲಿಗೆ ಹೊಣೆ ಮಾಡಿ ಶಿವರಾಜ್ ತಂಗಡಗಿ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ತಾನು ಮಂತ್ರಿಯಾಗಬೇಕು ಅಂತ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಯತ್ನ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!